ಶಿರಸಿ: ಟಿಎಮ್ಎಸ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಪತ್ರಿಕಾ ದಿನಾಚರಣೆ : ದತ್ತಿನಿಧಿ ಪುರಸ್ಕಾರ ಪ್ರದಾನ
ಶಿರಸಿ: ಪತ್ರಿಕೋಧ್ಯಮಕ್ಕೆ ಉತ್ತರ ಕನ್ನಡ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಉತ್ತರ ಕನ್ನಡ ಜಿಲ್ಲಿಯಿಂದ ಬರುವಷ್ಟು ಗುಣಮಟ್ಟದ ಪತ್ರಕರ್ತರು ಬೆರೆ ಯಾವ ಜಿಲ್ಲೆಯಲ್ಲೂ ಇಲ್ಲ. ರಾಜ್ಯ ಮಟ್ಟದ ಎಲ್ಲಾ ಪತ್ರಿಕೆಗಳ ಮುಖ್ಯ ಸ್ಥಾನದಲ್ಲಿ ಉತ್ತರ ಕನ್ನಡದವರೇ ಇದ್ದಾರೆ. ಇಲ್ಲಿನ ಜನ,ಜಲ, ಪತ್ರಕರ್ತರನ್ನು ಹುಟ್ಟಿ ಹಾಕುವ ರೀತಿ ವಿಭಿನ್ನ ವಾಗಿದೆ ಎಂದು ಹಿರಿಯ ಪತ್ರಕರ್ತ ಮಹಾಬಲ ಸೀತಾಳಬಾವಿ ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಶಿರಸಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ದತ್ತಿನಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರಾದ ನಾವು ಬರವಣಿಗೆಯಲ್ಲಿ ತೊಡಗಿಕೊಂಡು ಕೆಲಸ ಮಾಡುತ್ತೇವೆ. ಕಷ್ಟಪಟ್ಟು ಕೆಲಸ ಮಾಡುವ ಬದ್ದತೆ ಜಿಲ್ಲೆಯ ಪತ್ರಕರ್ತರಿಗಿದೆ ಎಂದರು.