ಬೆಂಗಳೂರು ಉತ್ತರ: ಒಳಮೀಸಲಾತಿ ವಿಚಾರದಲ್ಲಿ ಸರ್ಕಾರ ದಲಿತರಿಗೆ ಅನ್ಯಾಯ ಮಾಡಿದೆ: ನಗರದಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಒಳ ಮೀಸಲಾತಿ ಜಾರಿಗೆ ತರಬೇಕು ಅಂತ ಬೀದಿ ಬೀದಿಗಳಲ್ಲಿ ಹೋರಾಟ ನಡೆಯುತ್ತಿದೆ. ಆದ್ರೆ ಬಿಜೆಪಿ ಸರ್ಕಾರ A,B,C,D ನಾಲ್ಕು ಭಾಗ ಮಾಡಿದ್ದೇವೆ. A-6%, B5.5%, C-4% D-1% ನೀಡಲಾಗಿದೆ. ಆದ್ರೆ ಇದನ್ನ ಕಾಂಗ್ರೆಸ್ ಸರ್ಕಾರ ಒಪ್ಪದೆ, ಕೋರ್ಟ್ ಆದೇಶ ಬಂದು ಒಂದು ವರ್ಷವಾಗಿದೆ. ದಲಿತರಿಗೆ ಅನ್ಯಾಯ ಮಾಡಿದ್ದಾರೆ. ಯಾವ ಪರಿಶಿಷ್ಟ ಜಾತಿಗಳು ಸೌಮ್ಯವಾಗಿ ಇರ್ತಿದ್ದವು. ಬೀದಿಗೆ ಬಂದು ಹೋರಾಟ ಮಾಡುವಂತೆ ಕಾಂಗ್ರೆಸ್ ಸರ್ಕಾರ ಮಾಡಿದೆ. ನಾಗಮೋಹನ್ ದಾಸ್ ಕಮಿಟಿ ಮಾಡಿದ್ದಾರೆ.