ಜ. 14,15 ರಂದು ಅಂಬಿಗರ 10ನೇ ಶರಣ ಸಂಸ್ಕೃತಿ ಉತ್ಸವ 2026 ವಚನ ಗ್ರಂಥ ಮಹಾ ರಥೋತ್ಸವ -------------- ಬೀದರ : ಮುಂಬರುವ ಜನವರಿ 14 ಮತ್ತು 15 ರಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ)ಸುಕ್ಷೇತ್ರ ನರಸೀಪುರ, ಹಾವೇರಿ ಜಿಲ್ಲೆಯಲ್ಲಿ ಅಂಬಿಗರ 10ನೇ ಶರಣ ಸಂಸ್ಕೃತಿ ಉತ್ಸವ 2026 ವಚನ ಗ್ರಂಥ ಮಹಾ ರಥೋತ್ಸವ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಶಿಲಾಮಂಟಪ, ಕಂಚಿನ ಪುತ್ತಳಿ ಲೋಕಾರ್ಪಣೆ ಹಾಗೂ ಶ್ರೀ ಮಹರ್ಷಿ ವೇದವ್ಯಾಸ ಕಲ್ಯಾಣ ಮಂಟಪ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನರಸೀಪುರದ ನಿಜಶರಣ ಅಂಬಿಗರ ಚೌಡಯ್ಯ ಗುರು ಪೀಠಾಧಿಪತಿಗಳಾದ ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿ ತಿಳಿಸಿದರು.