ಬೆಂಗಳೂರಿನ ಸಿದ್ದಾಪುರದಲ್ಲಿ ನಡೆದ 7.11 ಕೋಟಿ ರೂಪಾಯಿ ಎಟಿಎಂ ಹಣದ ದರೋಡೆ ಪ್ರಕರಣದಲ್ಲಿ ಶನಿವಾರ ಪೊಲೀಸ್ ತನಿಖೆ ತೀವ್ರಗೊಂಡಿದೆ. ದರೋಡೆಕೋರರು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮೂಲಕ ಪರಾರಿಯಾಗಿದ್ದು, ಅಲ್ಲಿ ಕುಪ್ಪಂ ತಾಲ್ಲೂಕಿನ ಕುರ್ಮಾನಿಪಲ್ಲಿಯ ನಿರ್ಜನ ಪ್ರದೇಶದ ಬಳಿ ಸಿಎಂಎಸ್ ವಾಹನದಲ್ಲಿ ಹಣ ತುಂಬಲು ಬಳಸುವ ಬಾಕ್ಸ್ಗಳು ಪತ್ತೆಯಾಗಿವೆ. ದರೋಡೆ ಮಾಡಿದ ಒಟ್ಟು 7.11 ಕೋಟಿ ರೂಪಾಯಿ ಹಣದಲ್ಲಿ ಒಂದು ಕೋಟಿಗೂ ಅಧಿಕ ಹಣದೊಂದಿಗೆ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. 5 ಕೋಟಿ ರೂ. ಹಣ ವಶಕ್ಕೆ ಪಡೆಯಲಾಗಿದ್ದು, ಪ್ರಮುಖ ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ.