ಎಸ್.ಎನ್ ಗೆ ಮಂತ್ರಿ ಸ್ಥಾನಕ್ಕೆ ಒತ್ತಾಯ, ಕೋಲಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಸಚಿವ ಸಂಪುಟದ ಪುನಃರಚನೆಯ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹುತ್ತೂರು ಹೋಬಳಿಯ ಕಾಂಗ್ರೆಸ್ ಮುಖಂಡರು ನಗರದ ಕೋಲಾರಮ್ಮ ದೇವಸ್ಥಾನದಲ್ಲಿ ಗುರುವಾರ ಬೆಳ್ಳಗ್ಗೆ 10 ಗಂಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು, ಈ ಸಂದರ್ಭದಲ್ಲಿ ಹುತ್ತೂರು ಗ್ರಾಪಂ ಮಾಜಿ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಕೋಟೆ ನಾರಾಯಣಸ್ವಾಮಿ ಮಾತನಾಡಿ ಎಸ್.ಎನ್ ನಾರಾಯಣಸ್ವಾಮಿ ಅವರು ಬಂಗಾರಪೇಟೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ಮೂರನೇ