ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಅಪರ ಆಯುಕ್ತರು ಲೋಖಂಡೆ ಸ್ನೇಹಲ್ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಇಂಜಿನಿಯರಿಂಗ್ ಇಲಾಖೆ, ಬಿಎಂಟಿಸಿ ಹಾಗೂ ಸಂಚಾರ ಪೊಲೀಸ್ ಇಲಾಖೆ ಅಧಿಕಾರಿಗಳನ್ನೊಳಗೊಂಡ ಜಂಟಿ ಸಭೆಯನ್ನ ಪೂರ್ವ ಜಿಬಿಎ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ನಡೆಸಲಾಯಿತು. ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಮುಖ ಜಂಕ್ಷನ್ಗಳ ಸಮೀಪದಲ್ಲಿರುವ 21 ಬಸ್ ಶೆಲ್ಟರ್ಗಳನ್ನು ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಜಂಕ್ಷನ್ಗಳಿಂದ ದೂರಕ್ಕೆ ಸ್ಥಳಾಂತರಿಸುವ ಸಲುವಾಗಿ ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು.