ದಾಂಡೇಲಿ : ಕರ್ನಾಟಕ ಸರಕಾರದ ಆದೇಶದಂತೆ ನಗರ ಹಾಗೂ ತಾಲೂಕಿನ ವಿವಿದೆಡೆ ಶೇ.60% ಪ್ರತಿಶತ ಕನ್ನಡದಲ್ಲಿ ಶೇಕಡಾ 40% ಪ್ರತಿಶತ ಆಂಗ್ಲ ಭಾಷೆಯಲ್ಲಿ ನಾಮಫಲಕಗಳು ಇರಬೇಕೆಂಬ ಆದೇಶವಿದ್ದರೂ ದಾಂಡೇಲಿ ನಗರ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಈ ಆದೇಶವನ್ನು ಪಾಲಿಸದೆ ಆಂಗ್ಲ ಭಾಷೆಯಲ್ಲಿಯೇ ನಾಮಫಲಕಗಳನ್ನು ಅಳವಡಿಸಿರುವುದು ಕಂಡುಬರುತ್ತಿದೆ. ಹೀಗಿರುವಾಗ ಆಂಗ್ಲ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರವೇ ನಾರಾಯಣಗೌಡ ಬಣವು ಗುರುವಾರ ಸಂಜೆ 4:00 ಗಂಟೆ ಸುಮಾರಿಗೆ ದಾಂಡೇಲಿ ನಗರದ ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರಿಗೆ ಲಿಖಿತ ಮನವಿಯನ್ನು ನೀಡಿದೆ.