ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದೂರವಾಣಿಯಲ್ಲಿ ಅಸಭ್ಯವಾಗಿ ನಿಂದನೆ ಮಾಡಿದನ್ನು ಖಂಡಿಸಿ, ಆರ್ಎಸ್ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದ ಚಾಮರಾಜೇಶ್ವರ ಉದ್ಯಾನ ವನ ಮುಂಭಾಗದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಯೋಗೇಂದ್ರ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಅಲ್ಲಿ ಮಾನವ ಸರಪಳಿ ರಚಿಸಿ ಆರ್ ಎಸ್ ಎಸ್ ಪ್ರತಿಕೃತಿ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.