ದಾಂಡೇಲಿ : ದೇವಸ್ಥಾನಗಳಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಆಶ್ರಯದಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಸ್ಥಾನಗಳ ಕಮಿಟಿಯ ಪದಾಧಿಕಾರಿಗಳ ಸಭೆಯನ್ನು ಶುಕ್ರವಾರ ಸಂಜೆ 5:30 ಗಂಟೆ ಸುಮಾರಿಗೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಉಪಸ್ಥಿತರಿದ್ದ ಪಿಎಸ್ಐ ಗಳಾದ ಅಮೀನ್ ಅತ್ತಾರ್ ಮತ್ತು ಕಿರಣ್ ಪಾಟೀಲ್ ಅವರು ದೇವಸ್ಥಾನಗಳಲ್ಲಿ ನಡೆಯುವ ಕಳ್ಳತನವನ್ನು ನಿಯಂತ್ರಿಸುವುದಕ್ಕಾಗಿ ಸಿಸಿಟಿವಿ ಅಳವಡಿಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕರೆ ನೀಡಿದರು.