ಮಳವಳ್ಳಿ : ಕನ್ನಡ ಭಾಷೆ ಉಳಿಸಿ ಬೆಳೆಸುವಲ್ಲಿ ಆಟೋ ಚಾಲಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಸರಗೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರು ನಿರ್ದೇಶಕ ಹಾಗೂ ಶೈಕ್ಷಣಿಕ ದಾನಿಗಳು ಆದ ಕೆ.ವಿ. ಸುಬ್ರಹ್ಮಣ್ಯ ರಾಜೇಅರಸು ಶ್ಲಾಘಿಸಿದ್ದಾರೆ. ತಾಲೂಕಿನ ಸರಗೂರು ಹ್ಯಾಂಡ್ ಪೋಸ್ಟ್ ಗ್ರಾಮದಲ್ಲಿರುವ ಜೈ ಭುವನೇಶ್ವರಿ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಶನಿವಾರ ಸಾಯಂ ಕಾಲ 5.30 ರ ಸಮಯದಲ್ಲಿ ಏರ್ಪಡಿಸಲಾಗಿದ್ದ 8ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬಳಿಕ ಮಾತಾಡಿದ ಅವರು ಇತ್ತೀಚಿನ ದಿನಗಳಲ್ಲಿ ಆಟೋ ಚಾಲಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ಹೇಳಿದರು.