ಚಿಕ್ಕಮಗಳೂರು: ನಗರದ ಗಾಂಧಿನಗರದ ಬಳಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ
ಚಿಕ್ಕಮಗಳೂರು ನಗರದ ಗಾಂಧಿನಗರದ ಆಟೋ ಸರ್ಕಲ್ ಬಳಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರು ಆರೋಪಿಗಳನ್ನು ನಗರ ಸಿಇಎನ್ ಮತ್ತು ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಗರ ಸಿಇಎನ್ ಮತ್ತು ಅಪರಾಧ ಠಾಣೆಯ ಪೊಲೀಸರು ಪಿಎಸ್ಐ ರಘುನಾಥ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಗರದ ದೋಣಿ ಕಣದ ನಿವಾಸಿಗಳಾದ ಪ್ರಜ್ವಲ್ ಮತ್ತು ಯಶವಂತ್ ಇಬ್ಬರನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.