ಉದ್ಯಮಿಗಳು ನಮ್ಮ ಸಹೋದರ, ಸಹೋದರಿಯರು. ಬೆಂಗಳೂರು ನಿಮ್ಮ ನಗರ, ಇದರ ಘನತೆಗೆ ಘಾಸಿ ಮಾಡಬೇಡಿ ಎಂದು ಹೇಳಿದ್ದೇನೆ. ನಮ್ಮನ್ನು ಟೀಕೆ ಮಾಡಿದವರನ್ನು ದೂರ ಮಾಡಲು ಆಗುವುದಿಲ್ಲ. ಅವರ ಸಲಹೆ ಸೂಚನೆಗಳನ್ನು ನಾವು ಕೇಳಬೇಕು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ನಡೆದ ನಾಗರಿಕರ ಜತೆ ಸಂವಾದದ ನಂತರ ಉದ್ಯಮಿಗಳ ಜೊತೆ ಡಿನ್ನರ್ ಮೀಟಿಂಗ್ ಬಗ್ಗೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಾತನಾಡಿ, "ನೀವು ಟೀಕೆ ಮಾಡಿದರೆ ಈ ನಗರದ ಬಗ್ಗೆ ಅಂತರರಾಷ್ಟ್ರೀಯ ಸುದ್ದಿಯಾಗುತ್ತದೆ ಎಂದು ಅವರಿಗೆ ಹೇಳಿದ್ದೇನೆ.ಉಳಿದ ಚರ್ಚೆ ವಿಚಾರಗಳನ್ನು ಸಮಯ ಬಂದಾಗ ತಿಳಿಸುತ್ತೇನೆ. ಮೋಹನ್ ದಾಸ್ ಪೈ, ಕಿರಣ್ ಮಜುಂದಾರ್ ಷಾ ಮತ್ತಿತರರ ಜೊತೆ ಮಾತುಕತೆ ನಡೆಸಲಾಯಿತು