ಸಿದ್ಧಾಪುರ: ತಾಲ್ಲೂಕಿನ ದೊಡ್ಮನೆ ಗ್ರಾ.ಪಂ ವ್ಯಾಪ್ತಿಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿ ಪೂಜೆ
ಸಿದ್ದಾಪುರ : ತಾಲೂಕಿನ ದೊಡ್ಮನೆ ಗ್ರಾಮ ಪಂಚಾಯತದಲ್ಲಿ ಮಂಗಳವಾರ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಗುದ್ದಲಿ ಪೂಜೆ ನೆರವೇರಿಸಿದರು. ದೊಡ್ಮನೆ ಪಂಚಾಯತ ವ್ಯಾಪ್ತಿಯ ಕುಮಟಾ-ಕೊಡಮಡಗಿ ರಾಜ್ಯ ಹೆದ್ದಾರಿಯಿಂದ ಕೋಡಿಗದ್ದೆ, ಸಾಲ್ಕೋಡ, ಹೊನ್ನಾವರ ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಈ ವೇಳೆ ಗ್ರಾಮ ಪಂಚಾಯತ ಪ್ರಮುಖರು, ಅಧಿಕಾರಿಗಳು ಇದ್ದರು.