ಹುಬ್ಬಳ್ಳಿ: ಉಣಕಲ್ಲಿನಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ ಇತಿಹಾಸ ಪ್ರಸಿದ್ಧವಾಗಿದೆ. ಈ ದೇವಸ್ಥಾನದ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ಮುಂದಿನ ಬಜೆಟ್ನಲ್ಲಿ ಸರ್ಕಾರದಿಂದ ಅಗತ್ಯ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದು ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಹಾಗೂ ವಿಧಾನಸಭೆ ಅರ್ಜಿಗಳ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಲಮಾಣಿ ಅವರು ಹೇಳಿದರು. ನಗರದ ಪಾಲಿಕೆಯ ಸಭಾಭವನದಲ್ಲಿ ಅರ್ಜಿಗಳ ವಿಚಾರಣೆ ಜರುಗಿಸಿ, ಪತ್ರಿಕಾಗೋಷ್ಠಿ ಜರುಗಿಸಿ ಅವರು ಮಾತನಾಡಿದರು. ದೇವಸ್ಥಾನದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತದೆ. ಈಗಾಗಲೇ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಸೂಕ್ತ ರೀತಿಯಲ್ಲಿ ಸ್ಥಳಾಂತರ ಮಾಡಬೇಕು. ಅಲ್ಲದೇ ಅವರಿಗೆ ಬೇರೆ ಕಡೆಯಲ