ರೈತರನ್ನು ಒಳಗೊಂಡಂತೆ ಚರ್ಚೆ ಮಾಡಿ ನ್ಯಾಯ ಒದಗಿಸಲಾಗುವುದು ಕೋಲಾರ : ಕೋಲಾರ ತಾಲೂಕು ಹುತ್ತೂರು ಹೋಬಳಿ, ಶಿಳ್ಳೆಂಗೆರೆ, ಹರಟಿ ಮಲ್ಲಂಡಳ್ಳಿ, ಕೋಟಿಗಾನಹಳ್ಳಿ, ಅಬ್ಬಿಣಿ, ಅರಳಕುಂಟೆ ಗ್ರಾಮಗಳ ಜಂಟಿ ಸರ್ವೆ ಕಾರ್ಯ ಮುಗಿದಿದ್ದು ಅಂತಿಮ ವರದಿ ಬಂದ ತಕ್ಷಣ ಅರಣ್ಯ ಇಲಾಖೆ ಕಂದಾಯ ಇಲಾಖೆ ಹಾಗೂ ರೈತರನ್ನು ಒಳಗೊಂಡಂತೆ ಚರ್ಚೆ ಮಾಡಿ ನ್ಯಾಯ ಒದಗಿಸಲಾಗುವುದೆಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವರು ಇಂದು ಆಭಾಗದ ರೈತರ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿ, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದರು.