ರಾತ್ರಿ 10:30ರ ಸುಮಾರಿಗೆ ನಾಗರಭಾವಿಯ ನಮ್ಮೂರ ತಿಂಡಿ ಸಮೀಪದ ಮಲೇ ಮಹದೇಶ್ವರ ದೇವಸ್ಥಾನದ ಬಳಿ ಲಾರಿ ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 29 ವರ್ಷದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಮೂಲದ ಪ್ರಕಾಶ್ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪರಿಚಯಸ್ಥರ ಮಗುವಿನ ಹುಟ್ಟುಹಬ್ಬಕ್ಕೆ ತೆರಳಿದ್ದ ಪ್ರಕಾಶ್ ಮತ್ತು ಸ್ನೇಹಿತರು ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ. ಸ್ನೇಹಿತನಿಗೆ ಸಣ್ಣ ಗಾಯಗಳಾಗಿದ್ದು, ಪ್ರಕಾಶ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.