ರಾಯಚೂರು: ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಯ ಸದುಪಯೋಗಕ್ಕೆ ಡಿಸಿ ಮನವಿ
ರಾಯಚೂರು ಜಿಲ್ಲಾಡಳಿತವು ಮಹಾನಗರ ಪಾಲಿಕೆ ಮತ್ತು ಇನ್ನೀತರ ಇಲಾಖೆಗಳ ಸಹಯೋಗದೊಂದಿಗೆ 30 ದಿನಗಳ ಸಮಯ ರಾಯಚೂರ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಯ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ. ಬುಧವಾರ 5 ಗಂಟೆಗೆ ಪತ್ರಿಕ ಹೇಳಿಕೆ ನೀಡಿರುವ ಅವರು ಅತ್ಯುನ್ನತ ಐಎಎಸ್, ಐಪಿಎಸ್, ಐಆರ್ಎಸ್, ಕೆಎಎಸ್ ಪರೀಕ್ಷೆಗಳು ಸೇರಿದಂತೆ ಎಫ್ ಡಿಎ, ಎಸ್ ಡಿಎ, ಪೊಲೀಸ್, ಎಲ್ಲ ಬಗೆಯ ಗ್ರೂಪ್ ಸಿ ಪರೀಕ್ಷೆಗೆ ಅನುಕೂಲವಾಗಲಿದೆ ಹಾಗಾಗಿ ವಿದ್ಯಾರ್ಥಿಗಳು ಸದಪಯೋಗಪಡಿಸಿಕೊಳ್ಳಬೇಕು ಎಂದರು.