ದಾಂಡೇಲಿ : ಗಾಂಧಿನಗರದ ಶ್ರೀ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದಲ್ಲಿ ಇಂದು ಶುಕ್ರವಾರ ಸಂಜೆ 7.30 ಗಂಟೆ ಸುಮಾರಿಗೆ ಕಾರ್ತಿಕೋತ್ಸವ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ಜರುಗಿತು. ಕಾರ್ತಿಕೋತ್ಸವದ ನಿಮಿತ್ತ ಆದಿಶಕ್ತಿ ದುರ್ಗಾದೇವಿಗೆ ಲಿಂಗಬೈರವಿ ಅಲಂಕಾರವನ್ನು ಮಾಡಲಾಗಿತ್ತು. ಪೂಜಾ ಕಾರ್ಯಕ್ರಮದ ಯಶಸ್ವಿಗೆ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಶ್ರಮಿಸಿದ್ದರು.