ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಆಟೋ ಚಾಲಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಶನಿವಾರ ರಾತ್ರಿ 9 ಗಂಟೆ ವೇಳೆ ಘಟನೆ ನಡೆದಿದ್ದು ಮಾಳಪ್ಪನಹಟ್ಟಿ ಗ್ರಾಮದ ಆಟೋ ಚಾಲಕ 29 ವರ್ಷದ ತಿಪ್ಪೇಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ ಎಂದು ತಿಳಿದು ಬಂದಿದೆ. ಇನ್ನೂ ಈ ಆಟೋ ಚಾಲಕಒನ್ ವೇ ನಲ್ಲಿ ಬಂದಿದ್ದಕ್ಕೆ ಪೊಲೀಸರು ತಡೆದು ನಿಲ್ಲಿಸಿ ಪ್ರಶ್ನಿಸಿದ್ದಾರೆ