ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ, ರಾಯಚೂರು ತಾಲೂಕಾ ಮಟ್ಟದ ಪ್ರಬಂಧ ಸ್ಪರ್ಧೆ ಕಾರ್ಯಕ್ರಮವು ನಗರದ ಹಾಶ್ಮಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಯಿತ್ತು. ಬಿಇಓ ಡಾ.ಈರಣ್ಣ ಕೋಸಗಿ ಸಸಿಗೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ ಚುನಾವಣೆಯ ಸಂದರ್ಭದಲ್ಲಿ ಒಂದೊಂದು ಮತವು ಅತ್ಯಮೂಲ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿಯ ಮೂಡಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರ ದಿನಾಚರಣೆ ಹಿನ್ನಲೆಯಲ್ಲಿ ಹಲವಾರು ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತದೆ. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ಭಾಗವಹಿಸಬೇಕು. ವಿದ್ಯಾರ್