ಮಾನ್ವಿ ವಿಧಾನಸಭಾ ಕ್ಷೇತ್ರದ ಮರಾಠ ಗ್ರಾಮದಲ್ಲಿ ಶ್ರೀ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ಆಗಮಿಸಲು ಭಕ್ತರಿಗೆ ಸರಿಯಾದ ರಸ್ತೆ ನಿರ್ಮಾಣ ಮಾಡಲು ಸಚಿವ ಎನ್ ಎಸ್ ಭೊಸರಾಜ್, ಸಂಸದ ಕುಮಾರ್ ನಾಯಕ್, ಮಾನ್ವಿ ಶಾಸಕ ಹಂಪಯ್ಯ ಸಾಹಾರ್ ಭೂಮಿ ಪೂಜೆ ಸಲ್ಲಿಸಿದರು. ಈ ವೇಳೆ ಗ್ರಾಮದ ಮುಖಂಡರು, ಪ್ರಮುಖರು ಇದ್ದರು. ಈ ವೇಳೆ ಮಾತನಾಡಿದ ಸಚಿಬ ಭೊಸರಾಜು ಅವರು ಕುಡಿಯುವ ನೀರು, ವಿದ್ಯುತ್ ಸಂಪರ್ಕವನ್ನು ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುತ್ತೇನೆ ಹಾಗೂ ಆದಷ್ಟು ಬೇಗನೆ ಹೆಚ್ಚಿನ ಅನುದಾನವನ್ನು ಈ ಭಾಗಕ್ಕೆ ನೀಡುವ ಮೂಲಕ ಅಭಿವೃದ್ಧಿ ಪಡಿಸಲಾಗುವುದು, ನಿಮ್ಮೆಲ್ಲರ ಅಭಿಮಾನದ ಸಹಕಾರ, ಪ್ರೀತಿ, ವಿಶ್ವಾಸ ನಮ್ಮ ಮೇಲಿರಲಿ ಎಂದು ತಿಳಿಸಿದರು.