ಭಟ್ಕಳ: ಹೂತ್ಕಳದ ಏಕಾದಶಿ ಹಿನ್ನೆಲೆಯಲ್ಲಿ ಶ್ರೀ ಧನ್ವಂತರಿ ವಿಷ್ಣುವಿಗೆ ಲಕ್ಷ ತುಳಸಿ ಅರ್ಚನೆ
ಭಟ್ಕಳ ತಾಲ್ಲೂಕಿನ ಹೂತ್ಕಳದ ಸರ್ವರೋಗ ನಿವಾರಕ ಶಕ್ತಿಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಕ್ಷೇತ್ರ ಧನ್ವಂತರಿ ವಿಷ್ಣುಮೂರ್ತಿ ಶ್ರೀ ವಿಘ್ನೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆತೆ ಲೋಕಕಲ್ಯಾಣಾರ್ಥವಾಗಿ ಪ್ರಥಮ ಏಕಾದಶಿಯ ದಿನವಾದ ಭಾನುವಾಎದಂದು ಶ್ರೀ ಧನ್ವಂತರಿ ವಿಷ್ಣುವಿಗೆ ಲಕ್ಷ ತುಳಸಿ ಅರ್ಚನೆ ನೆರವೇರಿತು. ಈ ಪ್ರಯಕ್ತ ಬೆಳಿಗ್ಗೆ ವಿಘ್ನೇಶ್ವರ ದೇವರ ಸನ್ನಿಧಿಯಲ್ಲಿ ಅಭಿಷೇಕದೊಂದಿಗೆ ಸಹಸ್ರದೂರ್ವಾರ್ಚನೆ, ವಿಶೇಷ ಅಲಂಕಾರ ಪೂಜೆ ಹಾಗೂ ಧನ್ವಂತರಿಯಲ್ಲಿ ಶ್ರೀಸೂಕ್ತ, ಪುರುಷಸೂಕ್ತಾದಿ ವಿಶೇಷ ಅಭಿಷೇಕಗಳು, ಕಲ್ಪೋಕ್ತ ಸಹಸ್ರನಾಮ, ಲಕ್ಷ ತುಳಸಿ ಅರ್ಚನೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.