ಕಾರವಾರ: ರಿಶೆಲ್ ಡಿಸೋಜಾ ಆತ್ಮಹತ್ಯೆ ಪ್ರಕರಣ ಶವದ ಮರು ಮರಣೋತ್ತರ ಪರೀಕ್ಷೆಗೆ ಕುಟುಂಬದಿಂದ ನಗರದಲ್ಲಿ ಜಿಲ್ಲಾಡಳಿತಕ್ಕೆ ಮನವಿ
ಕದ್ರಾದಲ್ಲಿ ನಡೆದ ಯುವತಿ ರಿಶೇಲ ಕೀನ್ತೋದ ಡಿಸೋಜಾ ಅವರ ಆತ್ಮಹತ್ಯೆ ಪ್ರಕರಣವು ಇದೀಗ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಪ್ರಕರಣದ ಸುತ್ತ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಜ. 09 ರಂದು ಸಂಭವಿಸಿದ ಈ ಘಟನೆಗೆ ಸಂಬಂಧಿಸಿದಂತೆ ಕದ್ರಾ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್ 2023 ರ ಕಲಂ 108 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದರೂ, ತನಿಖೆಯ ಗತಿಯ ಬಗ್ಗೆ ಮೃತರ ಕುಟುಂಬಸ್ಥರು ಮತ್ತು ಸಾರ್ವಜನಿಕ ವಲಯದಲ್ಲಿ ಭಾರೀ ಅಸಮಾಧಾನ ವ್ಯಕ್ತವಾಗಿದೆ. ಮೃತಳ ತಾಯಿ ರೀನಾ ಡಿಸೋಜಾ ಅವರು ಈ ಸಾವಿನ ಹಿಂದೆ ರಾಜಕೀಯ ಪ್ರಭಾವವಿರುವ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದು, ತಮ್ಮ ಮಗಳಿಗೆ ನ್ಯಾಯ ಸಿಗಬೇಕೆಂದು ಸೋಮವಾರ ಮಧ್ಯಾಹ್ನ1ಕ್ಕೆ ನಗರದಲ್ಲಿ ಜಿಲ್ಲಾಡಳಿತದ ಮೊರೆ ಹೋಗಿದ್ದಾರೆ.