ಕೆಎಸ್ಆರ್ಟಿಸಿ ವ್ಯವಸ್ಥಾಪಕರ ವಿರುದ್ಧ ಸಾರ್ವಜನಿಕರ ಆಕ್ರೋಶ: ನಿಲ್ದಾಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ತೆರವು! ಶ್ರೀನಿವಾಸಪುರ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕೆಎಸ್ಆರ್ಟಿಸಿ ವ್ಯವಸ್ಥಾಪಕರು (ಮ್ಯಾನೇಜರ್) ಪೊಲೀಸರ ಸಮ್ಮುಖದಲ್ಲಿ ಟ್ರ್ಯಾಕ್ಟರ್ ಮತ್ತು ಟೆಂಪೋಗಳಿಗೆ ತುಂಬಿಸಿ ಸಾಗಿಸಿರುವ ಘಟನೆ ಸೋಮವಾರ ನಡೆದಿದೆ. ಈ ಅನಿರೀಕ್ಷಿತ ಕ್ರಮದಿಂದ ಆಕ್ರೋಶಗೊಂಡಿರುವ ಸಾರ್ವಜನಿಕರು ಕೆಎಸ್ಆರ್ಟಿಸಿ ವ್ಯವಸ್ಥಾಪಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಸ್ ನಿಲ್ದಾಣದ ನಂದಿನಿ ಪಾರ್ಲರ್ ಮತ್ತು ಎಟಿಎಂ ಮಧ್ಯ ಭಾಗದ ಕೊನೆಯಲ್ಲಿ ನಿಲ್ಲಿಸಿದ್ದ ವಾಹನಗಳನ್ನು ತೆರವುಗೊಳಿಸಲಾಗಿ