ಭಾರತೀಯ ಜನತಾ ಪಾರ್ಟಿ ಉಡುಪಿ ವತಿಯಿಂದ ಇಂದು ಕುತ್ಯಾರು ಗುತ್ತುಬೈಲಿನಲ್ಲಿ ನಡೆದ "ಕಮಲ ಕೃಷಿ ಕೂಟ" ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಕಾರ್ಯಕ್ರಮನ್ನು ಉದ್ಘಾಟಿಸಿ ಶುಭಹಾರೈಸಲಾಯಿತು. ಕೃಷಿತೋ ನಾಸ್ತಿ ದುರ್ಭಿಕ್ಷಂ ಕೃಷಿಯನ್ನು ನಂಬಿದವರಿಗೆ ಎಂದಿಗೂ ಬರಗಾಲ ಬರುವುದಿಲ್ಲ ಎಂದು ಹೇಳಿದ ಅವರು ಇಂದಿನ ದಿನಗಳಲ್ಲಿ ಭತ್ತದ ಕೃಷಿ ಮಾಡುವವರ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ ಯುವ ಪೀಳಿಗೆಗೆ ಕೃಷಿಯ ಬಗ್ಗೆ ನಾವು ಅರಿವು ಮೂಡಿಸುವ ಕಾರ್ಯವಾಗಬೇಕಿದೆ ಎಂದರು.