ಹೊಳಲ್ಕೆರೆ ಪಟ್ಟಣದಲ್ಲಿ ರೈತ ಸಂಘದ ವತಿಯಿಂದ ಭದ್ರಾ ಮೇಲ್ದಂಡೆ ನೀರಾವರಿ ಬಗ್ಗೆ ಸಭೆ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹೊಳಲ್ಕೆರೆ ರೈತ ಕಚೇರಿಯಲ್ಲಿ ಭದ್ರಾ ಮೇಲ್ದಂಡೆ ನೀರಾವರಿ ಬಗ್ಗೆ ಎರಡನೇ ಸಭೆ ಸೇರಲಾಗಿತ್ತು ಈ ಸಭೆಯಲ್ಲಿ ವರ್ತಕರು ಹಾಗೂ ಸಂಘಟನೆಗಳು ಹಾಗೂ ರೈತ ಮುಖಂಡರು ಪಾಲ್ಗೊಂಡು ನೀರಾವರಿ ಹೋರಾಟದ ಬಗ್ಗೆ ಹಾಗೂ ಚಳುವಳಿ ಬಗ್ಗೆ ಚರ್ಚಿಸಲಾಯಿತು.