ಯಲ್ಲಾಪುರ : ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಯೋಗ ಕ್ಷೇಮ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಯುಕ್ತಶ್ರಯದಲ್ಲಿ ಜ.30 ರಂದು ಸಂಜೆ 4 ಕ್ಕೆ ತುಮಕೂರಿನ ಗುಬ್ಬಿ ವೀರಣ್ಣ ಕಲಾಮಂದಿರದಲ್ಲಿ ಪತ್ರಿಕಾ ವಿತರಕರ ಕುರಿತು ನಸುಕಿನ ನೊಗ ಎಂಬ ಏಕವ್ಯಕ್ತಿ ರಂಗಪ್ರಯೋಗ ಪ್ರದರ್ಶನ ನಡೆಯಲಿದೆ. ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕರನ್ನು ಮೊಟ್ಟಮೊದಲ ಬಾರಿಗೆ ಇಡೀ ದೇಶದಲ್ಲಿ ಈ ಶ್ರಮ್ ಯೋಜನೆ ಅಡಿಯಲ್ಲಿ ಸೇರಿಸಲು ಶ್ರಮಿಸಿದ್ದ ಅಂದಿನ ಕಾರ್ಮಿಕ ಸಚಿವರು ಹಾಲಿ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ರಿಗೆ ಗಾಂಧಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷ ಶಂಭುಲಿಂಗ ತಿಳಿಸಿದರು.