ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಹತ್ಯೆ ಖಂಡಿಸಿ ಚಿತ್ರದುರ್ಗದಲ್ಲಿ ಪಂಜಿನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಲಾಯಿತು. ಶುಕ್ರವಾರ ಸಂಜೆ 7 ಗಂಟೆಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಬಾಂಗ್ಲಾದೇಶದಲ್ಲಿ ಹಿಂದೂ ಯುವಕ ದೀಪು ಚಂದ್ರದಾಸ್ ರ ಹತ್ಯೆ ಖಂಡಿಸಿ ನಗರದ ಆನೇ ಬಾಗಿಲು ಬಳಿಯಿಂದ ಗಾಂಧಿ ವೃತ್ತದ ಮೂಲಕ ಓಬವ್ವ ವೃತ್ತದ ವರೆಗೆ ಪಂಜಿನ ಮೆರವಣಿಗೆ ನಡೆಸಿ ಗಾಂಧಿ ವೃತ್ತದಲ್ಲಿ ಬಾಂಗ್ಲಾದೇಶದ ಪ್ರಧಾನಿ ಮೊಹಮ್ಮದ್ ಯೂನಸ್ ಅವರ ಅಣುಕು ಶವವನ್ನ ಸುಟ್ಟು ಹಾಕಿ ಬಾಂಗ್ಲಾದೇಶದ ಭಾವುಟಕ್ಕೆ ಬೆಂಕಿ ಹಚ್ಚಿ ಆಕ್ರೋಷವನ್ನ ವ್ಯಕ್ತಪಡಿಸಿದ್ದಾರೆ.