ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶನುವಾರ ಸಂಜೆ 5 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿ, “ಬಹಿರಂಗ ಚರ್ಚೆಗೆ ಬನ್ನಿ ಎಂದು ನಾನು ಕರೆಯುತ್ತಲೇ ಇದ್ದೇನೆ. ಎ ಖಾತಾ ಬಿ ಖಾತಾ ವಿಚಾರದಲ್ಲಿ ಯಾವ ಭ್ರಷ್ಟಾಚಾರ ನಡೆಯುತ್ತಿದೆ? ಬೆಂಗಳೂರು ನಾಗರಿಕರ ಆಸ್ತಿ ದಾಖಲೆ ಸರಿಪಡಿಸಿಕೊಳ್ಳಲು, ಅವರಿಗೆ ಮುಂದೆ ಬ್ಯಾಂಕ್ ಸಾಲ ಹಾಗೂ ಇತರೆ ಸೌಲಭ್ಯ ಸಿಗಬೇಕು, ಜನರಿಗೆ ಉತ್ತಮ ಸೌಕರ್ಯ ಒದಗಿಸಬೇಕು, ಜನರು ತೆರಿಗೆ ಪಾವತಿಸುವಂತಾಗಬೇಕು ಎಂಬ ಉದ್ದೇಶದಿಂದ ನಾವು ಈ ಯೋಜನೆ ಮಾಡುತ್ತಿದ್ದೇವೆ.