ಹುಮ್ನಾಬಾದ್: ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ: ಮಲ್ಕಾಪುರದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್ ಪಾಟೀಲ್
Homnabad, Bidar | Oct 22, 2025 ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ಜೊತೆಗೆ ದುಷ್ಟ ಮುಕ್ತರನ್ನಾಗಿಸುವ ಗುರುತರ ಜವಾಬ್ದಾರಿ ಪಾಲಕರ ಮೇಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್ ಪಾಟೀಲ್ ಸಲಹೆ ನೀಡಿದರು. ತಾಲೂಕಿನ ಮಲ್ಕಾಪುರದಲ್ಲಿ ಬುಧವಾರ ಸಂಜೆ 4:30ಕ್ಕೆ ನಡೆದ ಮಾಳಿಂಗರಾಯ ಜಾತ್ರೆ ನಿಮಿತ್ತ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಪರಿತೋಷಕ್ ವಿತರಿಸಿ ಅವರು ಮಾತನಾಡಿದರು. ಪ್ರದೀಪ ಮುತ್ಯಾ ದಿವ್ಯ ಸಾನಿಧ್ಯ ವಹಿಸಿದ್ದರು.