ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಅವರು ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸದಾಶಿವನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕೊಟ್ಟ ಮಾತಿನಂತೆ ನಡೆಯುವವರು ಸಿದ್ದರಾಮಯ್ಯ,ಸಿದ್ದರಾಮಯ್ಯ ಗೂ ಜವಾಬ್ದಾರಿ ಇದೆ. ಸಿದ್ದರಾಮಯ್ಯ ಯಾರಿಗೂ ಕೊಟ್ಟ ಮಾತಿಗೆ ತಪ್ಪಿಲ್ಲ. ಹಿಂದಿನ ಸರ್ಕಾರದಲ್ಲಿ ಕೂಡ ಅವರು ಮಾತಿನ ಪ್ರಕಾರವೇ ನಡೆದಿದ್ದಾರೆ ಈಗಿನ ಸರ್ಕಾರದಲ್ಲೂ ಕೂಡ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ. ಮುಂದೆಯೂ ಕೊಟ್ಟ ಮಾತಿನ ಪ್ರಕಾರವೇ ನಡೆದುಕೊಳ್ಳುತ್ತಾರೆ. ನನ್ನಣ್ಣನಿಗೆ ಅದೃಷ್ಟ ಇದ್ದರೆ ಸಿಎಂ ಆಗ್ತಾನೆ, ಎಲ್ಲದಕ್ಕೂ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಉತ್ತರ ಕೊಡುತ್ತದೆ. ನಾನು ಎಲ್ಲ ಮಾತಿಗೂ ಸಾಕ್ಷಿಯೇ,