ಹೊಸದುರ್ಗ :ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಮಧ್ಯಾಹ್ನ 1ಗಂಟೆಗೆ ಹಕ್ಕು ಪತ್ರಗಳ ವಿತರಣೆ ಕಾರ್ಯಕ್ರಮ ನಡೆಯಿತು. ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಚಿತ್ರದುರ್ಗ, ತಾಲ್ಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮ, ಉಪಗ್ರಾಮ, ಬಗರ್ ಹುಕುಂ ಸಾಗುವಳಿ ಪತ್ರ, ದರಾಖಾಸ್ತು ಪೋಡಿ, 94C ಹಕ್ಕುಪತ್ರ, E ಪೌತಿ ಖಾತೆ, ಸಾಮಾಜಿಕ ಭದ್ರತಾ ಯೋಜನೆ ಹಕ್ಕು ಪತ್ರಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಸುಧಾಕರ್, ಹೊಸದುರ್ಗ ಶಾಸಕರಾದ ಬಿಜಿ ಗೋವಿಂದಪ್ಪ ಇದ್ದರು.