ದಾಂಡೇಲಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘ ದಾಂಡೇಲಿ ಇವರ ಆಶ್ರಯದಡಿ ಸಂಘದ ಶತಾಬ್ದಿ ನಿಮಿತ್ತವಾಗಿ ಭಾನುವಾರ ಸಂಜೆ 4:00 ಗಂಟೆ ಸುಮಾರಿಗೆ ಪಥ ಸಂಚಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸಭಾಂಗಣದಿಂದ ಆರಂಭಗೊಂಡ ಪಥ ಸಂಚಲನವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಪಥ ಸಂಚಲನದ ಮುಕ್ತಾಯದ ನಂತರ ಸಭಾ ಕಾರ್ಯಕ್ರಮ ಜರುಗಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹ ಬೌದ್ಧಿಕ ಪ್ರಮುಖರಾದ ರಾಮಚಂದ್ರ ಏಡಕೆ ಅವರು ಬೌದ್ಧಿಕ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಇಲಾಖೆಯ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ವೈ.ಟಿ.ರಾಜಣ್ಣನವರ ಭಾಗವಹಿಸಿದ್ದರು.