ಬೆಂಗಳೂರು ಉತ್ತರ: ಮೇ 7ರವರೆಗೂ ರಾಜ್ಯಾದ್ಯಂತ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಗಾಳಿ ಮಳೆ ಬಗ್ಗೆ ಹವಮಾನ ಇಲಾಖೆ ವರದಿ
ರಾಜ್ಯದಲ್ಲಿ ಮೂರ್ನಾಲ್ಕು ದಿನಗಳುಂದಲು ಹಲವು ಜಿಲ್ಲೆಗಳಲ್ಲಿ ಮಳೆ ಸುರೀತಿದೆ. ಅದಾಗಿಯೂ ಇಂದಿನಿಂದ ಮೂರು ದಿನಗಳ ಕಾಲ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದಿನಿಂದ ಅಂದರೆ ಮೇ 5ರಿಂದ ಮೇ 7ರ ವರೆಗೆ ಮಳೆ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ದಕ್ಷಿಣ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ್ದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವು ಕಡೆಗಳಲ್ಲಿ ಆಲಿ ಕಲ್ಲು ಮಳೆ ಬೀಳುವ ಎಚ್ಚರಿಕೆಯೂ ನೀಡಲಾಗಿದ್ದು ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.