ಮಂಠಾಳ ಗ್ರಾಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೀದರ್, ಹಾಗೂ ಗ್ರಾಮ ಪಂಚಾಯತ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಠಾಳ ಇವರ ಸಂಯುಕ್ತ ಆಶ್ರಯದಲ್ಲಿ ,ಕಾಲೇಜು ಆವರಣದಲ್ಲಿ ನಶಾಮುಕ್ತ ಅಭಿಯಾನ ಕಾರ್ಯಕ್ರಮದಡಿಯಲ್ಲಿ ರಂಗೋಲಿ ಹಾಗೂ ಪ್ರಬಂಧ ಸ್ಪರ್ಧೆಯ ಆಯೋಜಿಸಲಾಗಿತ್ತು ಈ ಒಂದು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಶಿವಣ್ಣ ಲೊಡ್ಡೆ ಅವರು ಕಾರ್ಯಕ್ರಮ ಉದ್ಘಾಟಿಸಿದರು,ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣಪತಿ ಥಮೂರೆ ಅವರ ಮಾತನಾಡಿ ಇಂದಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಇವುಗಳಿಗೆ ಬಲಿಯಾಗದೆ ಆರೋಗ್ಯವಂತ ಜೀವನವನ್ನು ನಡೆಸಬೇಕೆಂದು ಹಾಗೆ ಯುವಕರು ದೈಹಿಕವಾಗಿ ಹಾಗೂ ಮಾನಸಿಕವ