ದೊಡ್ಡಬಳ್ಳಾಪುರ: ಪವಿತ್ರ ವೈಕುಂಠ ಏಕಾದಶಿ ಪರ್ವದಿನವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವಾರು ಗ್ರಾಮಗಳ ವೆಂಕಟೇಶ್ವರ ಸ್ವಾಮಿ, ರಂಗನಾಥ ಸ್ವಾಮಿ, ವೇಣುಗೋಪಾಲ ಸ್ವಾಮಿ ದೇವಾಲಯಗಳಲ್ಲಿ ಅದರಲ್ಲೂ ವಿಶೇಷವಾಗಿ ವಡ್ಡರಹಳ್ಳಿ,ಹಾಗೂ ನಗರದ ತೇರಿನಬೀದಿಯ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾ ದೇವಸ್ಥಾನಗಳಲ್ಲಿ ಮಂಗಳವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ವೈಕುಂಠ ಏಕಾದಶಿಯ ಆಚರಿಸಲಾಯಿತು.ವೈಕುಂಠ ದ್ವಾರ ದರ್ಶನಕ್ಕಾ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.