ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಂದೇಗಾಲದ ಸ್ಕಂದಗಿರಿ ಪಾರ್ವತಿ ಸಮೇತ ಸೋಮೇಶ್ವರ ದೇವಾಲಯಕ್ಕೆ ಮೈಸೂರಿನ ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಬೇಟಿ ನೀಡಿ ದೇವರ ದರ್ಶನ ಪಡೆದು, ಹೋಮಪೂಜೆ ನೆರವೇರಿಸಿ ಪ್ರವಚನ ನೀಡಿದರು. ಶ್ರೀಗಳ ಬೇಟಿ ಹಿನ್ನೆಲೆಯಲ್ಲಿ ದೇವಾಲಯವನ್ನು ತಳಿರು, ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಪಾರ್ವತಾಂಭೆ ಮತ್ತು ಸೋಮೇಶ್ವರ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಲಾಯಿತು. ಮೊದಲಿಗೆ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು, ನಂತರ ಆವರಣದಲ್ಲಿ ಹೋಮಪೂಜೆ ನೆರವೇರಿಸಿ ಪ್ರವಚನ ನೀಡಿದರು.