ಕೆಜಿಎಫ್ ಊರಿಗಾಂ ನವೀಕೃತ ರೈಲು ನಿಲ್ದಾಣ ಉದ್ಘಾಟನೆ ನೆರವೇರಿಸಿದ ಸಚಿವ ವಿ ಸೋಮಣ್ಣ ಕೇಂದ್ರದ ರೈಲ್ವೇ ಸಚಿವ ವಿ.ಸೋಮಣ್ಣರವರು ಭಾನುವಾರ ಮಧ್ಯಾಹ್ನ 1 ಗಂಟೆಯಲ್ಲಿ ಕೆಜಿಎಫ್ ಊರಿಗಾಂ ನವೀಕೃತ ರೈಲು ನಿಲ್ದಾಣ ಉದ್ಘಾಟನೆ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು ಕೆಜಿಎಫ್ ನಿಂದ ಬೆಂಗಳೂರಿಗೆ ತೆರಳುವ ರೈಲಿನಲ್ಲಿ ಜನಸಂದನೆ ಹೆಚ್ಚಿದ್ದು ಭೋಗಿಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ರಾಷ್ಟ್ರದ ಅಭಿವೃದ್ಧಿಗೆ ಕರ್ನಾಟಕವು ಸೇರಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ತಿಳಿಸಿದ್ದಾರೆ ಸಂಸದ ಎಂ.ಮಲ್ಲೇಶ್ ಬಾಬು, ಕೆಜಿಎಫ್ ಶಾಸಕಿ ರೂಪಕಲಾ, ಪರಿಷತ್ ಸದಸ್ಯ ಗೋವಿಂದರಾಜು, ಮಾಜಿ ಶಾಸಕ ವೈ.ಸಂಪಂಗಿ ಹಾಜರಿದ್ದರು